Connect with us

    LATEST NEWS

    ರೌಡಿ, ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡಿ: ರಾಮಲಿಂಗಾರೆಡ್ಡಿ

     ರೌಡಿ, ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡಿ: ರಾಮಲಿಂಗಾರೆಡ್ಡಿ

    ಬೆಂಗಳೂರು,ಮಾರ್ಚ್ 16: ರೌಡಿ ಹಾಗೂ ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡಿ ಹೀಗೆಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಪೊಲೀಸರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.


    ಬೆಂಗಳೂರಿನಲ್ಲಿ ಹಿರಿಯಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.

    ಇತ್ತೀಚಿನ ದಿನಗಳಲ್ಲಿ ಪೊಲೀಸರ ಮೇಲೆ ರೌಡಿಗಳು ನಡೆಸುವುದು ಹೆಚ್ಚಾಗಿದೆ.

    ಪೊಲೀಸರಿಗೆ ಗನ್ ನೀಡಿರುವುದು ಅಪರಾಧಿಗಳನ್ನು ಶಿಕ್ಷಿಸಲು ಹೊರತು ಆಭರಣದಂತೆ ಇಟ್ಟುಕೊಳ್ಳುವುದಕ್ಕಲ್ಲ ಎಂದು ಹೇಳಿದರು.

    ರೌಡಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದನ್ನು ಕೇಳಲು ಗೃಹ ಸಚಿವನಾಗಿ ನಾನು ಬಯಸುವುದಿಲ್ಲ,

    ಇಂಥ ಕ್ರಿಮಿನಲ್ ಗಳನ್ನು ಮಟ್ಟ ಹಾಕುವ ಪೊಲೀಸರಿಗೆ ಬೆಂಗಾವಲಾಗಿ ನಾನಿದ್ದೇನೆ ಎಂದರು.

    ರಾಜ್ಯದಲ್ಲಿನ ಬಾರ್, ರೆಸ್ಟೋರೆಂಟ್‌ಗಳನ್ನು ನಿಗದಿತ ಸಮಯದೊಳಗೆ ಬಾಗಿಲು ಮುಚ್ಚಿಸಬೇಕು.

    ವಿದೇಶಿ ಪ್ರಜೆಗಳ ಉಪಟಳಕ್ಕೆ ಕಡಿವಾಣ ಹಾಕಬೇಕು.

    ಕದ್ದ ಮಾಲುಗಳನ್ನು ಖರೀದಿ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವರು ನುಡಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply