Connect with us

    DAKSHINA KANNADA

    ಸಣ್ಣ ದಾಖಲೆಗಾಗಿ ಅಲೆಡಾಡಿಸುತ್ತಿದ್ದ ಅಧಿಕಾರಿ: ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ ಶಾಸಕ!

    ಪುತ್ತೂರು, ಮೇ 26: ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಮಹಿಳೆಯ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.

    ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ್ದಾರೆ. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ.

    ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ ಯಾವುದೇ ಕಾರಣಕ್ಕೂ ತೊಂದರೆ‌ ಕೊಡಬಾರದು, ಮುಂದೆ ಇಂಥಹ ಘಟನೆ ನಡೆದಲ್ಲಿ ಸುಮ್ಮನೆ ಕೂರುವುದಿಲ್ಲಎಂದು ಶಾಸಕ ಅಶೋಕ್ ಕುಮಾರ್ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply