Connect with us

KARNATAKA

ಕಾವೇರಿ ನದಿಯಲ್ಲಿ ನೀರು ಪಾಲಾಗಿದ್ದ ಮೂವರ ಶವ ಮೇಲಕ್ಕೆತ್ತಿದ್ದ ರಕ್ಷಣಾ ದಳ .!  

ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಕಾವೇರಿ ನದಿಗೆ ಸ್ನಾನಕ್ಕಿಳಿದು ನೀರು ಪಾಲಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದ್ದು ನೀರಿನಿಂದ ಮೇಲಕ್ಕೆತ್ತಲಾಗಿದೆ.   ಚಿಕ್ಕತ್ತೂರಿನ ಶ್ರೀನಿವಾಸ್‌ ಅಲಿಯಾಸ್‌ ಅಪ್ಪು (23), ಕಣಿವೆಯ ಹಕ್ಕೆ ಸಚಿನ್‌ (22) ಹಾಗೂ ಮುಳ್ಳುಸೋಗೆ ಜನತಾಕಾಲನಿ ವಿನೋದ್‌(23)  ಮೃತ ಯುವಕರಾಗಿದ್ದಾರೆ.

ಐವರು ಸ್ನೇಹಿತರು ಕಾವೇರಿ ನದಿ ಬಳಿ ಕಾರು ನಿಲ್ಲಿಸಿ ಸ್ನಾನಕ್ಕೆ ತೆರಳಿದ ಸಂದರ್ಭ ಓರ್ವ ಆಳವಾದ ಪ್ರದೇಶದಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ ಮತ್ತೋರ್ವ ಮುಳುಗುವುದನ್ನು ಕಂಡು ಅವನನ್ನು ರಕ್ಷಿಸಲು ಇನ್ನೊಬ್ಬ ಸ್ನೇಹಿತ ಮುಂದಾದ ಸಂದರ್ಭ ಮೂವರೂ ಕೂಡ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ಅರಿತು ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಶ್ರೀನಿವಾಸ್‌ ಶವ ಗುರುವಾರ ರಾತ್ರಿ  ಪತ್ತೆಯಾದರೆ, ಇನ್ನುಳಿದ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆದಿತ್ತು. ಶುಕ್ರವಾರ ಬೆಳಿಗ್ಗೆ ಮತ್ತಿಬ್ಬರ ಶವಗಳು ಪತ್ತೆಯಾಗಿದ್ದು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳೀಯರ  ನೆರವಿನೊಂದಿಗೆ ಮೇಲಕ್ಕೆ ತೆಗೆದಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *