Connect with us

    DAKSHINA KANNADA

    ಪೊಲೀಸರ ಕೈಗೆ ಸಿಗಬಾರದು ಅಂತಾ ಉಂಗುರ ನುಂಗಿದ ಕಳ್ಳ..!

    ಮಂಗಳೂರು, ಮೇ 31 : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಬಂಧಿಸಿದ್ದ ಆರೋಪಿ ಚಿನ್ನದ ಉಂಗುರಗಳನ್ನೇ ನುಂಗಿ ಎಡವಟ್ಟು ಮಾಡಿಕೊಂಡಿದ್ದಾನೆ.

    ಸುಳ್ಯ, ಪುತ್ತೂರಿನಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತ್ರಿಶೂರ್ ಜಿಲ್ಲೆಯ ಶಿಬು ಎಂಬಾತನನ್ನು ನಗರ ಪೋಲಿಸರು ಬಂಧಿಸಿದ್ದರು,ಆರೋಪಿ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು, ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ವೈದ್ಯರು ಎಕ್ಸ್ ರೇ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಹೊಟ್ಟೆಯಿಂದ 35 ಗ್ರಾಂ ತೂಕದ ಉಂಗುರಗಳನ್ನು ವೈದ್ಯರು ಹೊರ ತೆಗೆದಿದ್ದು,ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ‌ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ಸೇರಿಸಿ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯ ಆರೋಗ್ಯ ಸ್ಥಿತಿ ಚೆನ್ನಾಗಿದ್ದು,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply