Connect with us

    LATEST NEWS

    ಅಂಗಡಿ ಮುಚ್ಚೋಕೆ ಹೇಳಿದ ಪೋಲಿಸರಿಗೆ ಥಳಿಸಿದ ಗ್ರಾಮಸ್ಥರು

    ಭೋಪಾಲ್,ಮೇ 29​: ಕರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. ಹಾಗಿದ್ದರೂ ಅಂಗಡಿ ತೆರೆದಿದ್ದ ಗ್ರಾಮಕ್ಕೆ ಭೇಟಿ ಕೊಟ್ಟ ಪೊಲೀಸ್​ ಅಧಿಕಾರಿಗಳು ಅಂಗಡಿ ಮುಚ್ಚಿಸಲು ಪ್ರಯತ್ನಿಸಿದ್ದಕ್ಕೆ ಗ್ರಾಮಸ್ಥರೆಲ್ಲ ಸೇರಿ ಅಧಿಕಾರಿಗಳಿಗೇ ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಆದರೆ ಅದನ್ನು ಲೆಕ್ಕಿಸದ ಗ್ರಾಮಸ್ಥರು ಮೇ 28ರಂದು ಮಾಮೂಲಿನಂತೆ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಲಾಕ್​ಡೌನ್​ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂದು ಪರಿಶೀಲಿಸಲು ಬಂದ ಪೊಲೀಸರು ಗ್ರಾಮಸ್ಥರ ನಡವಳಿಕೆಯಿಂದ ಬೇಸರಗೊಂಡಿದ್ದಾರೆ.

    ಅಂಗಡಿಗಳನ್ನು ಕೂಡಲೇ ಮುಚ್ಚುವಂತೆ ತಿಳಿಸಿದ್ದಾರೆ. ಅಂಗಡಿ ಮುಚ್ಚಿಸುವ ವೇಳೆ ಪೊಲೀಸ್​ ಅಧಿಕಾರಿ ಅಲ್ಲಿನ ಗ್ರಾಮಸ್ಥರೊಬ್ಬರ ತಲೆಗೆ ಹೊಡೆದರು ಎನ್ನಲಾಗಿದೆ. ಅದೇ ಕಾರಣಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply