Connect with us

    LATEST NEWS

    ಯುವತಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಇಬ್ಬರೂ ಗಂಭೀರ

    ಉಡುಪಿ, ಅಗಸ್ಟ್ 30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

    ಸೌಮ್ಯಶ್ರೀ ಭಂಡಾರಿ ಚೂರಿ ಇರಿತಕ್ಕೊಳಗಾಗಿದ್ದ ಯುವತಿ, ಮೆಡಿಕಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಇಂದು
    ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ಬಂದು ತನ್ನಲ್ಲಿದ್ದ ಚೂರಿಯಿಂದ ಯುವತಿಗೆ ಇರಿದು ಬಳಿಕ ತಾನು ಅಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

    ಸ್ಥಳದಲ್ಲಿ ಚೂರಿ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವಾರದ ಹಿಂದೆ ಯುವತಿಗೆ ನಿಶ್ಚಿತಾರ್ಥ ಆಗಿತ್ತು. ರಸ್ತೆ ಬದಿ ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರು ಅಂಬಾಗಿಲಿನವರು ಎಂದು ಮಾಹಿತಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply