Connect with us

    LATEST NEWS

    ಹಣಕಾಸಿನ ತೊಂದರೆಗೆ ಪಕ್ಕದ ಮನೆಗೆ ಕನ್ನ ಹಾಕಿದ್ದ ಖದೀಮ…..!!

    ಮಂಗಳೂರು ಜುಲೈ 13: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕಲೆವೇ ಗಂಟೆಗಳಲ್ಲಿ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪಕ್ಕದ ಮನೆಯಾತನೇ ಕಳ್ಳತನದ ಆರೋಪಿಯಾಗಿದ್ದಾನೆ.


    ಆರೋಪಿ ಕಳ್ಳತನವಾದ ಮನೆಯ ನೆರೆಮನೆಯ ನಿವಾಸಿ ಎಂದು ತಿಳಿದು ಬಂದಿದೆ. ಈತ ಹಣಕಾಸಿನ ತೊಂದರೆಯಲ್ಲಿದ್ದು, ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಕಳ್ಳತನ ನಡೆದ ಮನೆಯವರೊಂದಿಗೆ ಬಹಳ ಆತ್ಮೀಯತೆಯಿಂದಿದ್ದು, ಆ ಮನೆಯ ಆಗು ಹೋಗುಗಳನ್ನು ತಿಳಿದುಕೊಂಡಿದ್ದನು. ಮನೆಯವರು 2 ದಿನಗಳ ಕಾಲ ಮನೆಯಲ್ಲಿ ಇಲ್ಲದ ಸಂದರ್ಭ ನೋಡಿ ಮನೆಯ ಹೆಂಚು ತೆಗೆದು ಒಳಹೋಗಿ ಕಳ್ಳತನ ಮಾಡಿದ್ದಾನೆ.

    ಮನೆಯವರು ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಪೊಲೀಸರು 248.600 ಗ್ರಾಂ ತೂಕದ 11,06,270 ರೂ. ಮೌಲ್ಯದ ಚಿನ್ನಾಭರಣ ಸಹಿತ 4000 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply