Connect with us

    BANTWAL

    ಮನೆಕೆಲಸಕ್ಕಿದ್ದ ದಂಪತಿಯಿಂದ ಚಿನ್ನಾಭರಣ ಕಳವು : ಗಂಡ- ಹೆಂಡತಿ ಇಬ್ಬರೂ ಅರೆಸ್ಟ್..!

    ಬಂಟ್ವಾಳ, ಜುಲೈ 19 : ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು  ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ.

    ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ ಪ್ರಮೋದ್ ಹಾಗೂ ಆತನ ಪತ್ಮಿ ಸುಮತಿ ಯಾನೆ ಸುಮ‌‌ ಬಂಧಿತ ಆರೋಪಿಗಳು. ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಗಳನ್ನು ಬಂಧಿಸಿದ್ದಾರೆ.

    ಇವರಿಬ್ಬರು ದಂಬೆತಾರು ವಿನಯ ಚಂದ್ರನಾಯಕ್ ರವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದು, ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್-1, ಚಿನ್ನದ ಲಕ್ಷ್ಮಿ ಚೈನ್-01, ಚಿನ್ನದ ಪದಕ ಸಹಿತ ಚೈನು -1, ಚಿನ್ನದ ಲಕ್ಷ್ಮಿ ಪದಕ ಸಹಿತ ಚೈನ್-01, ಚಿನ್ನದ ಉಂಗುರಗಳು -03 (Total- 98Gram) ಚಿನ್ನಾಭರಣಗಳು , ಸದ್ರಿ ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,48,000/ ರೂಪಾಯಿಯ ಚಿನ್ನಾಭರಣಗಳನ್ನು ಕಳವುಗೈದಿದ್ದರು.

    ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಎಸ್.ಪಿ‌.ಹೃಷಿಕೇಶ್ ಸೋನಾವಣೆ ಅವರ ನಿರ್ದೇಶನ ದಂತೆ,ಎಡಿಸನಲ್ ಎಸ್.ಪಿ.ಕುಮಾರ್ ಚಂದ್ರ , ಬಂಟ್ವಾಳ ಡಿ.ವೈಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಅವರ ನೇತೃತ್ವದ ತಂಡ ದಲ್ಲಿ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಟಿ., ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳಾದ ಜಯರಾಮ ಕೆ.ಟಿ., ರಕ್ಷಿತ್, ಕರುಣಾಕರ, ಪೊಲೀಸ್ ಕಾನ್ಸ್ಟೇಬಲ್ ಗಳಾದ ಹೇಮರಾಜ್, ಸತೀಶ್, ಮನೋಜ್ ಕುಮಾರ್, ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಸವಿತಾ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ ಪ್ರಮೋದ್ ಹಾಗೂ ಆತನ ಪತ್ಮಿ ಸುಮತಿ ಯಾನೆ ಸುಮ‌‌ ಬಂಧಿತ ಆರೋಪಿಗಳು.

    ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಗಳನ್ನು ಬಂಧಿಸಿದ್ದಾರೆ.

    _

    Share Information
    Advertisement
    Click to comment

    You must be logged in to post a comment Login

    Leave a Reply