LATEST NEWS
ತೆಕ್ಕಟ್ಟೆ – ಆತ್ಮಹ*ತ್ಯೆಗೆ ಯತ್ನಿಸಿದ ತಂದೆ ತಾಯಿ ಮತ್ತು ಮಗ – ಇಬ್ಬರು ಸಾ*ವು ಮತ್ತೊಬ್ಬರ ಸ್ಥಿತಿ ಗಂಭೀರ

ಕುಂದಾಪುರ ಮೇ 15: ಅಪ್ಪ ಮಗ ಆತ್ಮಹತ್ಯೆಗೆ ಮಾಡಿಕೊಂಡಿರುವುದನ್ನು ನೋಡಿ ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಎಂದು ಗುರುತಿಸಲಾಗಿದೆ.
ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರ ಪರಿಸ್ಥಿತಿ ಗಂಭೀರವಾಗಿದ್ದು,ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದಾರೆ. ಈ ವೇಳೆ ಅವರ ಕೂಗು ಕೇಳಿ ಸ್ಥಳೀಯರು ಆಗಮಿಸಿ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಲತಃ ಕುಂದಾಪುರದವರಾದ ಮಾಧವ ದೇವಾಡಿಗ ಕುಟುಂಬ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಸುಮಾರು ಏಳು ವರ್ಷದಿಂದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾರೆ.

ತಂದೆ ಮತ್ತು ಮಗ ಕುಂದಾಪುರದ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸದ ಸಹಾಯಕಿಯಾಗಿದ್ದರು ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಪಕ್ಕದ ಮನೆಯ ಮಹಿಳೆ ರಂಗೋಲಿ ಹಾಕಲೆಂದು ಮನೆಯಿಂದ ಹೊರಗಡೆ ಬಂದಾಗ ಮನೆಯ ಎದುರುಗಡೆ ಮನೆಯ ಬಾವಿಯಲ್ಲಿ ಕಿರುಚಾಟದ ಶಬ್ದ ಕೇಳಿಬಂತೆಬನ್ನಲಾಗಿದೆ. ಈ ವೇಳೆ ಅವರು ಬಾವಿಯಲ್ಲಿ ಇಣುಕಿ ನೋಡಿದಾಗ ತಾರಾ ದೇವಾಡಿಗ ಬಾವಿಯಲ್ಲಿ ಒದ್ದಾಡುತ್ತಿರುವುದನ್ನು ಕಂಡಿದ್ದಾರೆ. ತಕ್ಷಣ ಅವರು ಬೊಬ್ಬೆ ಹಾಕಿ ಅಕ್ಕ ಪಕ್ಕದವರನ್ನು ಕರೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಬಾವಿಗಿಳಿದು ತಾರಾ ಅವರನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಗಂಭೀರಾವಸ್ಥೆಯಲ್ಲಿರುವ ತಾರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.