KARNATAKA
ಜೂನ್ 5 ರ ಬಳಿಕ ಲಾಕ್ ಡೌನ್ ಭವಿಷ್ಯ ನಿರ್ಧಾರ – ಸಿಎಂ ಯಡಿಯೂರಪ್ಪ
ಬೆಂಗಳೂರು ಮೇ 29: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಜೂನ್ 5 ರಂದು ನಿರ್ಧರಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜೂನ್ 7ರ ವರೆಗೆ ಎಂದಿನಂತೆ ಲಾಕ್ಡೌನ್ ಇರುತ್ತದೆ. ಜೂನ್ 7ರ ನಂತರ ಲಾಕ್ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದೆನಿಸುತ್ತದೆ. ಆದರೆ ರಾಜ್ಯದ ಸ್ಥಿತಿಗತಿ ನೋಡಿಕೊಂಡು ಲಾಕ್ಡೌನ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜ್ಯದ ಜನರು ಸಹಕಾರ ನೀಡಬೇಕು. ಜೂನ್ 7ರ ವರೆಗೆ ರಾಜ್ಯದಲ್ಲಿ ಬಿಗಿ ಕ್ರಮ ಮುಂದುವರಿಯುತ್ತದೆ. ಕೊರೊನಾ ನಿಯಂತ್ರಣ ನೋಡಿಕೊಂಡು ಲಾಕ್ಡೌನ್ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದರು.
You must be logged in to post a comment Login