Connect with us

    DAKSHINA KANNADA

    ಪುತ್ತೂರು ತಾಲೂಕು ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆಗೆ ಯಾವುದೇ ತಡೆಯಾಗಿಲ್ಲ‌ : ಆಧ್ಯಕ್ಷ ಐ.ಬಿ.ಸಂದೀಪ್ ಕುಮಾರ್ ಸ್ಪಷ್ಟನೆ

    ಪುತ್ತೂರು, ನವೆಂಬರ್ 19: ತಾಲೂಕು ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆಗೆ ಯಾವುದೇ ತಡೆಯಾಗಿಲ್ಲ‌ : ಆಧ್ಯಕ್ಷ ಐ.ಬಿ.ಸಂದೀಪ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

    ಪುತ್ತೂರು ತಾಲೂಕು ಪತ್ರಕರ್ತರ ಸಂಘವು ಕಳೆದ 25 ವರ್ಷಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘವು ರಾಜ್ಯದ ಯಾವುದೇ ಇತರ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಪುತ್ತೂರು ಪತ್ರಕರ್ತರ ಸಂಘಕ್ಕೆ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ತಡೆ ನೀಡುವ ಅಧಿಕಾರವೂ ರಾಜ್ಯದ ಯಾವುದೇ ಸಂಘಗಳಿಗೆ ಇಲ್ಲ ಎನ್ನುವ ವಿಚಾರವನ್ನು ಪುತ್ತೂರು ಪತ್ರಕರ್ತರ ಸಂಘ ಸ್ಪಷ್ಟಪಡಿಸುತ್ತದೆ ಎಂದು ಸಂಘದ ಅಧ್ಯಕ್ಷ ಐ.ಬಿ. ಸಂದೀಪ್ ಕುಮಾರ್ ಮತ್ತು ಕಾರ್ಯದರ್ಶಿ ಅಜಿತ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    ಪದಾಧಿಕಾರಿಗಳ ಆಯ್ಕೆಗೆ ತಡೆ ನೀಡಲಾಗಿದೆ ಎನ್ನುವ ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ವಿಚಾರ. ಸಂಘವನ್ನು ಒಡೆಯಲು, ನಾಶ ಮಾಡಲು ಹವಣಿಸುತ್ತಿರುವ ಕೆಲ ವಿಚ್ಛಿದ್ರಕಾರಕ ಶಕ್ತಿಗಳು ಈ ವದಂತಿ ಹಬ್ಬಿಸುತ್ತಿವೆ. ಈ ಮೊದಲು ಸಂಘದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಿದ ಸಂಚಿನ ಒಂದು ಭಾಗ ಇದಾಗಿದೆಯೇ ಹೊರತು ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ.

    ಎಂದು ಅಧ್ಯಕ್ಷ ಐ‌‌.ಬಿ.ಸಂದೀಪ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಇಂಥ ಸುಳ್ಳು ಸುದ್ಧಿಗಳಿಂದ ಗೊಂದಲಕ್ಕೀಡಾಗಬಾರದೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply