DAKSHINA KANNADA
ವೃದ್ಧರನ್ನು ಕುರ್ಚಿಯಲ್ಲಿ ಹೊತ್ತು ಆಸ್ಪತ್ರೆ ಸಾಗಿದ ಯುವಕರು…!
ಸುಳ್ಯ: ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕೂರಿಸಿ ಎತ್ತಿಕೊಂಡು ಆಸ್ಪತ್ರೆಗೆ ಸೇರಿಸಿದ ಘಟನೆ ಗುತ್ತಿಗಾರಿನ ಮಡಪ್ಪಾಡಿ ಗ್ರಾಮದ ನಡುಬೆಟ್ಟಿನಲ್ಲಿ ನಡೆದಿದೆ.
ಈ ಭಾಗದಲ್ಲಿ ಸುಮಾರು ಹದಿನಾಲ್ಕು ಮನೆಗಳಿದ್ದು, ಅದನ್ನು ಸಂಪರ್ಕಿಸಲು ಇರುವ ಕಚ್ಚಾ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಆದ್ದರಿಂದ ಯಾವುದೇ ವಾಹನಗಳ ಚಾಲಕರು ಇಲ್ಲಿಗೆ ಬರಲು ಒಪ್ಪುತ್ತಿಲ್ಲ. ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳಾಗಿರುವ ಕಾರಣ ಬೇಸಗೆಯಲ್ಲಿ ಮಾತ್ರ ಜೀಪು, ಪಿಕಪ್ಗ್ಳು ಮಾತ್ರ ಸಂಚರಿಸುತ್ತವೆ.
ಮಳೆಗಾಲದಲ್ಲಿ ಯಾವ ವಾಹನಗಳೂ ಸಂಚರಿಸಲಾಗದ ಪರಿಸ್ಥಿತಿ ಇದೆ. ಹೀಗಾಗಿ ಎಲ್ಲ ರೀತಿಯ ಕೃಷಿ ಉತ್ಪನ್ನ ಮತ್ತು ಮನೆ ಬಳಕೆಯ ಸಾಮಗ್ರಿಗಳನ್ನು ಹೊತ್ತುಕೊಂಡೇ ಸಾಗಿಸಬೇಕಾದ ಸ್ಥಿತಿ ಇದೆ.
You must be logged in to post a comment Login