Connect with us

LATEST NEWS

ಮಂಗಳೂರು – ಪೊಲೀಸರಿಗೆ ಚೂರಿ ಇರಿದು ಕಳ್ಳ ಪರಾರಿ

ಮಂಗಳೂರು ಮಾರ್ಚ್ 24: ವಾಚ್ ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣ್ಣಪ್ಪ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಬೆಲೆಬಾಳುವ ವಾಚ್ ಕಳ್ಳತನದ ಆರೋಪಿ ಪಾವೂರಿನಲ್ಲಿ ಆತನ ಅತ್ತೆ ಮನೆಯಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದರು. ಕೃತ್ಯ ನಡೆಸಿದ ಆರೋಪಿ ಈ ಹಿಂದೆ ಕೂಡಾ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ಹಿಂದಿನ ಪ್ರಕರಣದಲ್ಲಿ ಬೆಲೆಬಾಳುವ ವಾಚ್ ನ್ನು ಅಂಗಡಿಯೊಂದಕ್ಕೆ ಮಾರಾಟ ಮಾಡಲು ತೆರಳಿದ್ದ ಮಾಹಿತಿಯನ್ನು ಅಂಗಡಿ ಮಾಲಿಕರು ಪೊಲೀಸರಿಗೆ ತಿಳಿಸಿದ್ದ ಮಾಹಿತಿ ಆಧಾರದಲ್ಲಿ ನಗರ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ತೆರಳಿದ್ದಾಗ ಬಂದರು ಠಾಣಾ ಪೊಲೀಸ್‌ ಸಿಬಂದಿ ವಿನೋದ್‌ ಮತ್ತು ಪ್ರವೀಣ್‌ ಎಂಬವರಿಗೆ ಆರೋಪಿ ಹಲ್ಲೆ ಮಾಡಿ ವಿನೋದ್ ಅವರಿಗೆ ಚೂರಿಯಂತಹ ಆಯುಧದಿಂದ ಇರಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *