Connect with us

    LATEST NEWS

    ಪಾಸಿಟಿವ್ ಬಂದು ಮನೆಯಲ್ಲಿ ವ್ಯವಸ್ಥೆ ಇಲ್ಲದವರು ದಯವಿಟ್ಟು ಕೋವಿಡ್ ಕೇರ್ ಸೆಂಟರ್‌ಗೆ ಬನ್ನಿ: ಜಿಲ್ಲಾಧಿಕಾರಿ ಜಿ.ಜಗದೀಶ್

    ಉಡುಪಿ, ಮೇ 18:  ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಮಾಣ ಹೆಚ್ಚಾಗುತ್ತಿದ್ದು, ದಿನಕ್ಕೆ 1000-1200 ಪ್ರಕರಣಗಳು ಬರುತ್ತಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ.

    ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿಲ್ಲ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸೋಂಕು ಕಂಡುಬರುತ್ತಿದೆ. ಪಾಸಿಟಿವ್ ಬಂದವರು ಹೊರಗಡೆ ತಿರುಗುತ್ತಿದ್ದಾರೆ ಎನ್ನುವ ದೂರು ಬರುತ್ತಿದೆ. ಪಾಸಿಟಿವ್ ಇದ್ದರೂ ಓಡಾಡುವವರು ಕಂಡು ಬಂದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು, ಅಂತಹವರನ್ನು ಅಲ್ಲಿಂದಲೇ ಕೋವಿಡ್ ಕೇರ್ ಸೆಂಟರ್‌ಗೆ ಶಿಫ್ಟ್ ಮಾಡುತ್ತೇವೆ

    ಪಾಸಿಟಿವ್ ಬಂದು ಮನೆಯಲ್ಲಿ ವ್ಯವಸ್ಥೆ ಇಲ್ಲದವರು ದಯವಿಟ್ಟು ಕೋವಿಡ್ ಕೇರ್ ಸೆಂಟರ್‌ಗೆ ಬನ್ನಿ, ಜಿಲ್ಲೆಯ ಮೂರು ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಇದೆ. ಅಲ್ಲಿ ಬಂದರೆ ನಿಮ್ಮ ಆರೋಗ್ಯ ರಕ್ಷಣೆ ಮಾಡುವ ಜವಾಬ್ದಾರಿ ಜಿಲ್ಲಾಡಳಿತದ್ದು ಮನೆಯವರಿಗೆ ತೊಂದರೆಯಾಗದ ರೀತಿಯಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಬನ್ನಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿಕೆ ನೀಡಿದ್ದಾರೆ.

    Video:

    Share Information
    Advertisement
    Click to comment

    You must be logged in to post a comment Login

    Leave a Reply