Connect with us

    LATEST NEWS

    ದುಬೈನಿಂದ ವಾರ್ನಿಂಗ್ ಪಡೆದ ಬೈಂದೂರು ಜೆಡಿಎಸ್ ಅಭ್ಯರ್ಥಿ

    ದುಬೈನಿಂದ ವಾರ್ನಿಂಗ್ ಪಡೆದ ಬೈಂದೂರು ಜೆಡಿಎಸ್ ಅಭ್ಯರ್ಥಿ

    ಉಡುಪಿ ಮೇ 4: ಉಡುಪಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದಂತೆ ಅಭ್ಯರ್ಥಿಗಳಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಜಿಲ್ಲೆಯ ಬೈಂದೂರಿನ ಜೆಡಿಎಸ್ ಅಭ್ಯರ್ಥಿಗೆ ದುಬೈನಿಂದ ಕೊಲೆ ಬೆದರಿಕೆ ಕರೆ ಬಂದಿದೆ.

    ಬೈಂದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರವಿ ಶೆಟ್ಟಿಗೆ ದುಬೈನಿಂದ ದುಷ್ಕರ್ಮಿಗಳು ಕರೆ ಮಾಡಿ ವಾರ್ನಿಂಗ್ ಮಾಡಿದ್ದಾರೆ. ಫೀಲ್ಡ್ ನಲ್ಲಿ ಸೈಲೆಂಟ್ ಆಗು. ಇಲ್ಲದಿದ್ದರೆ ಮನೆಗೆ ಹೋಗಲ್ಲ ಎಂದು ವಾರ್ನಿಂಗ್ ಮಾಡಿದ್ದಾರೆ ಎಂದು ರವಿ ಶೆಟ್ಟಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಿದ್ದಾರೆ.

    ದುಬೈನಿಂದ ಇಂಟರ್ನೆಟ್ ಮೂಲಕ ಕರೆ ಮಾಡಿದ್ದು, ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಈ ಹಿನ್ನಲೆಯಲ್ಲಿ ರವಿ ಶೆಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ರವಿ ಶೆಟ್ಟಿಗೆ ಗನ್ ಮ್ಯಾನ್ ನೀಡಿದ್ದಾರೆ.

    ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷನಾಗಿರುವ ರವಿ ಶೆಟ್ಟಿ ಕಳೆದ ಒಂದು ವರ್ಷದಿಂದ ಬೈಂದೂರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಎದುರಾಳಿ ಕಾಂಗ್ರೆಸ್ ಮತ್ತು ಬಿಜೆಪಿಗೆ ನಡುಕ ಹುಟ್ಟಿದ್ದು, ತಮ್ಮ ಮತಗಳ ವಿಭಜನೆಯಾಗಬಹುದೆಂದು ಈ ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು ರವಿ ಶೆಟ್ಟಿ ದೂರಿದ್ದಾರೆ.ಆದರೆ ನಾನು ಯಾವುದೇ ಗೊಡ್ಡು ಬೆದರಿಕೆಗೆ ಬಗ್ಗಲ್ಲ ಎಂದು ಜೆಡಿಎಸ್ ಅಭ್ಯರ್ಥಿ ರವಿ ಶೆಟ್ಟಿ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply