LATEST NEWS
RSS ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ- ಮತ್ತೆ ಮೂವರು ಆರೋಪಿಗಳ ಸೆರೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಅಗಸ್ಟ್ 19: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಪರೋಕ ಸಹಕಾರ ನೀಡಿದ ಆರೋಪದ ಮೇಲೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದೆ.
RSS ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ
ಜುಲೈ 4 ರಂದು ಬಂಟ್ವಾಳದ ಬಿ. ಸಿ ರೋಡ್ ಎಂಬಲ್ಲಿ ರಾತ್ರಿ ಬೈಕಿನಲ್ಲಿ ಬಂದ 3 ಮಂದಿ ದುಷ್ಕರ್ಮಿಗಳ ತಂಡ ಶರತ್ ಮಡಿವಾಳ್ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿ ಪರಾರಿಯಾಗಿತ್ತು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಬಂಧಿತ ಆರೋಪಿಗಳನ್ನು ಪುತ್ತೂರಿನ ನಿವಾಸಿ ಜಬ್ಬಾರ್,
ಸಕಲೇಶಪುರದ ನಿವಾಸಿ ಸುಹೇಲ್, ಉಪ್ಪಿನಂಗಡಿ ನಿವಾಸಿ ಸಾಧಿಕ್ ಎಂದು ಗುರುತಿಸಲಾಗಿದೆ. ಬಂಧಿತರು ಕೊಲೆ ಪ್ರಮುಖ ಆರೋಪಿಗಳಿಗೆ ಸಹಾಯ ನೀಡಿದ ಹಿನ್ನಲೆಯಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ಶರತ್ ಮಡಿವಾಳ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಒಟ್ಟು 8 ಜನರನ್ನು ಬಂಧಿಸಿದ್ದು, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಈಗಾಗಲೇ ವಿದೇಶಕ್ಕೆ ಪರಾರಿಯಾಗಿರುವ ಸಂಶಯ ವ್ಯಕ್ತಪಡಿಸಿದ ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
You must be logged in to post a comment Login