ಹಜ್ ಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತ್ಯು..!
ಕಾರವಾರ : ಸೌದಿ ಅರೇಬಿಯಾ ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಸದಸ್ಯರು ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಹಜ್ ಯಾತ್ರೆಗೆಂದು ಮಾ.26ರಂದು ಸೌ್ದಿ ಅರೇಬಿಯಾದ ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ ಸಂಭವಿಸಿದ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
You must be logged in to post a comment Login