Connect with us

KARNATAKA

ಹುಬ್ಬಳ್ಳಿಯಲ್ಲಿ ತಡ ರಾತ್ರಿ ಓಮಿನಿ ಕಾರು ಲಾರಿ ಮಧ್ಯೆ ಭೀಕರ ಅಪಘಾತ, ಮೂವರು ಮೃತ್ಯು…!!

ಹುಬ್ಬಳ್ಳಿ: ಶುಕ್ರವಾರ ತಡರಾತ್ರಿ  ಹುಬ್ಬಳ್ಳಿ (hubli) ತಾಲೂಕಿನ ಕಿರೆಸೂರು ಬಳಿ  ಸಂಭವಿಸಿದ  ಓಮಿನಿ ಕಾರು ಹಾಗೂ ಲಾರಿ ಮಧ್ಯೆಯ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದರೆ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಜಾಫರ್‌ಸಾಬ್ ಮಂಗಳೂರು (60), ಮಹ್ಮದ್ ಮುಸ್ತಫಾ ಮಂಗಳೂರು (36), ಶೋಹೆಬ್ ಮಂಗಳೂರು (6) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದು ಮೃತ ಜಾಫರ್‌ಸಾಬ್ ಕುಟುಂಬದವರ ಜೊತೆ ಪಾರ್ಶ್ವವಾಯು ಔಷಧಿ ತರಲು ಕಾರವಾರ ಜಿಲ್ಲೆಯ ಹಲಗಾ ಗ್ರಾಮಕ್ಕೆ ಹೋಗಿದ್ದರು. ಔಷಧಿ ಪಡೆದು ಮರಳಿ ಊರಿಗೆ ಬರುವ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Share Information
Continue Reading
Advertisement
Click to comment

Leave a Reply

Your email address will not be published. Required fields are marked *