Connect with us

LATEST NEWS

ಕಿನ್ನಿಗೋಳಿಯಲ್ಲಿ ಕಾಣಿಸಿಕೊಂಡ ಹುಲಿ ?

ಕಿನ್ನಿಗೋಳಿಯಲ್ಲಿ ಕಾಣಿಸಿಕೊಂಡ ಹುಲಿ ?

ಮಂಗಳೂರು ಜುಲೈ 02: ಮಂಗಳೂರು ಹೊರವಲಯದ ಕಿನ್ನಿಗೊಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ವದಂತಿ ಪರಿಸರದ ಜನರಲ್ಲಿ ಆತಂಕ ಮೂಡಿಸಿದೆ.

ಸಾಂದರ್ಭಿಕ ಚಿತ್ರಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಐಕಳ ನೆಲ್ಲಿಗುಡ್ಡೆಯಲ್ಲಿ ಹುಲಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ. ನೆಲ್ಲಿಗುಡ್ಡೆ ನಿವಾಸಿ ಐವನ್ ಸಲ್ಡಾನ ಇಂದು ಮುಂಜಾನೆ ತಮ್ಮ ಮನೆಯ ಪಕ್ಕ ಇರುವ ಅಡಿಕೆ ತೋಟಕ್ಕೆ ಹೋಗುವಾಗ ಎದುರಿನಲ್ಲಿ ಹುಲಿ ಕಂಡು ಬಂದಿದ್ದು, ಕೋಡಲೇ ಐವನ್ ಅವರು ಬೊಬ್ಬೆ ಹಾಕಿದ್ದು ಹುಲಿ ಒಡಿ ಹೋಗಿ ಪಕ್ಕದ ಪ್ರಾನ್ಸಿಸ್ ರೆಬೆಲ್ಲೋ ಎಂಬುವವರ ತೋಟದ ಕಂಪೌಂಡ್ ಒಳಗೆ ಹಾರಿ ಪಕ್ಕದ ಗುಡ್ಡಕ್ಕೆ ಒಡಿಹೋಗಿದೆ ಎಂದು ಹೇಳಲಾಗಿದೆ.

ಐವನ್ ರವರು ಕೂಡಲೇ ಅರಣ್ಯ ಇಲಾಖೆ ಮತ್ತು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಅರಣ್ಯಾಧಿಕಾರಿ ಕೆ.ಸಿ ಮ್ಯಾಥ್ಯೂ ಮತ್ತು ಮೂಲ್ಕಿ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಅಧಿಕಾರಿಗಳು ಹುಲಿ ಓಡಿ ಹೋದ ಜಾಗದಲ್ಲಿ ಹೆಜ್ಜೆ ಗುರುತನ್ನು ಹುಡುಕಾಡಿದ್ದು, ತೋಟದಲ್ಲಿ ಪೈರು ಇದ್ದ ಕಾರಣ ಸರಿಯಾಗಿ ಕಂಡು ಬಂದಿಲ್ಲ.

ಈ ಹಿಂದೆ ಮೂಡಬಿದ್ರೆ ವಲಯದಲ್ಲಿ ಅನೇಕ ಕಡೆ ಚಿರತೆ ಕಂಡು ಬಂದಿತ್ತು, ಆದರೆ ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುಲಿ ಕಂಡು ಬಂದ ಪ್ರಕರಣ ಇಲ್ಲ. ಕಿನ್ನಿಗೋಳಿಯ ಐಕಳ ದಲ್ಲಿ ಕಂಡು ಬಂದಿದ್ದು ಚಿರತೆ ಆಗಿರುವ ಸಾದ್ಯತೆ ಹೆಚ್ಚು ಎಂದು ಅರಣ್ಯಾಧಿಕಾರಿ ಕೆ.ಸಿ ಮ್ಯಾಥ್ಯೂ ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *