Connect with us

    BANTWAL

    ಬಂಟ್ವಾಳ ಎಸ್‌ಐ ರಾಮಕೃಷ್ಣ ತಂಡದ ಸಕಾಲಿಕ ಕಾರ್ಯಾಚರಣೆ, ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಗೋವು್ಗಳ ರಕ್ಷಣೆ.!

    ಬಂಟ್ವಾಳ: ದನಗಳನ್ನು ಕದ್ದು ತಂದು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಿ ವಧೆ ಮಾಡಲು ಕೊಂಡು ಹೋಗುವ ವೇಳೆ ಮಾಹಿತಿ ಆಧಾರಿಸಿ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ಐ. ರಾಮಕೃಷ್ಣ ನೇತ್ರತ್ವದ ತಂಡ ಲೊರೆಟ್ಟುಪದವು ಬಳಿ ದನಗಳನ್ನು ಸೇಫ್ ಮಾಡಿದ್ದಾರೆ.

    ಪರಾರಿಯಾಗಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ

    ಲೊರೆಟ್ಟೊಪದವು ಸಮೀಪದ ಟಿಪ್ಪು ನಗರ ಎಂಬಲ್ಲಿ ಪೋಲೀಸರು ಬೆನ್ನಟ್ಟಿ ದನಗಳನ್ನು ವಶಪಡಿಸಿಕೊಂಡಿದ್ದಾರೆ.
    ಓಮ್ನಿ ಕಾರಿನಲ್ಲಿ ಐದು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ ಕಾಲು ಕಟ್ಟಿ ತುಂಬಿಸಲಾಗಿತ್ತು.
    ಜಾಬೀರ್ ಮತ್ತು ನಾಸೀರ್ ಎಂಬವರು ಕಾರು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
    ಎಸ್. ಐ.ರಾಮಕೃಷ್ಣ ಅವರು ರೌಂಡ್ಸ್ ನಲ್ಲಿ ದ್ದ ವೇಳೆ ಓಮ್ನಿ ಕಾರೊಂದರ ಮೇಲೆ ಸಂಶಯಗೊಂಡು ಬೆನ್ನು ಬಿದ್ದಾಗ ಅತೀ ವೇಗದೊಂದಿಗೆ ಕಾರು ಹೋಗುವುದು ಕಂಡು ಬಂತು.
    ಎಸ್.ಐ.ಅವರ ಸಂಶಯ ಬಲಗೊಂಡು ಲೊರೆಟ್ಟೊಪದವಿನಿಂದ ಬೆನ್ನಟ್ಟಿದಾಗ ಕಾರು ಟಿಪ್ಪುನಗರ ಕಡೆಗೆ ಹೋಗಿ ಕಾರನ್ನು ಅಲ್ಲೇ ಬಿಟ್ಟು ಚಾಲಕ ಮತ್ತು ಕಾರಿನಲ್ಲಿದ್ದ ಇನ್ನೋರ್ವ ಪರಾರಿಯಾಗಲು ಯತ್ನಿಸಿದಾಗ ಬೆನ್ನಟ್ಟಿ ಬಂಧಿಸಿದ್ದಾರೆ. .
    ,ಇಬ್ಬರು ಕೂಡ ಈ ಹಿಂದೆ ದನ ಕಳವು ಪ್ರಕರಣದ ಪ್ರಮುಖ ಆರೋಪಿಗಳೆಂದು ತಿಳಿದು ಬಂದಿದೆ.
    ವಶಪಡಿಸಿಕೊಂಡ ವಾಹನ ಹಾಗೂ ಐದು ದನಗಳು ಠಾಣೆಯಲ್ಲಿ ಇದ್ದು, ನ್ಯಾಯಾಲಯದ ಅದೇಶ ಪಡೆದುಕೊಂಡು ಗೋ ಶಾಲೆಗೆ ಕಳುಹಿಸಿಕೊಡಲಾಗುವುದು.ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply