LATEST NEWS
ಟಿಪ್ಪರ್ ಹರಿಸಿ ಕೊಲೆ ಮಾಡಿದ ಆರೋಪಿ ಚಾಲಕ ಅರೆಸ್ಟ್

ಮಂಗಳೂರು ಫೆಬ್ರವರಿ 07: ಬುದ್ದಿವಾದ ಹೇಳಿದಕ್ಕೆ ವ್ಯಕ್ತಿಯ ಮೇಲೆ ಟಿಪ್ಪರ್ ಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟಿಪ್ಪರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೋಟೆ ಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಎಂದು ಗುರುತಿಸಲಾಗಿದೆ. ಆರೋಪಿ ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ಎಂದ ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಎಂಬವರಿಗೆ ರಾಡ್ ನಲ್ಲಿ ತಲೆಗೆ ಹೊಡೆದು ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಪ್ಪರ್ ಚಲಾಯಿಸಿದ್ದು, ಬಿದ್ದ ಫಯಾಝ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು. ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು. ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
