LATEST NEWS
ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡದಲ್ಲಿ ಕೊರೊನಾಗೆ ಎರಡು ಬಲಿ
ಮಂಗಳೂರು ಜುಲೈ 1: ದಕ್ಷಿಣಕನ್ನಡದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಇಂದು ಬೆಳಿಗ್ಗೆ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಬೆಂಗ್ರೆ ನಿವಾಸಿಯಾಗಿರುವ 78 ವರ್ಷದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಯಾಬಿಟಿಸ್ ಮತ್ತು ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದ ವ್ಯಕ್ತಿಗೆ ಕೊರೊನಾ ಸೊಂಕು ತಗುಲಿತ್ತು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮತ್ತೊಂದು ಪ್ರಕರಣ ಭಟ್ಕಳ ಮೂಲದ 31 ವರ್ಷ ಯುವಕ ಅಧಿಕ ರಕ್ತದೊತ್ತಡ ಹಿನ್ನಲೆ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಯುವಕ ಮೃತಪಟ್ಟ ಬಳಿಕ ಕೊರೊನಾ ಸೊಂಕು ದೃಢಪಟ್ಟಿದೆ.
ಇಂದು ಬೆಳಿಗ್ಗೆ ಹೊತ್ತಿನಲ್ಲೇ ಕೊರೊನಾಗೆ ಇಬ್ಬರು ಬಲಿಯಾಗಿರುವುದು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.
You must be logged in to post a comment Login