DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜುಲೈ 5) ರಜೆ ಘೋಷಣೆ
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆ ಬಿಡದೆ ಭಾರೀ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯಾದ್ಯಂತ ಸೋಮವಾರ ದಿನವಿಡಿ ಮಳೆಯಾಗಿದೆ.
ನಿರಂತರ ಮಳೆಯಾಗುತ್ತಿರುವ ಕಾರಣ ಸರ್ಕಾರಿ ಹಾಗು ಖಾಸಗಿ ಶಾಲಾ ಕಾಲೇಜು ಸೇರಿದಂತೆ ಅಂಗನವಾಡಿಯಿಂದ ಡಿಗ್ರಿ ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳಿಗೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಇಂದು (ಜುಲೈ 5) ರಜೆ ಘೋಷಣೆ ಮಾಡಿದ್ದಾರೆ
You must be logged in to post a comment Login