DAKSHINA KANNADA
ದ.ಕ ಶಾಲೆಗಳಿಗೆ ನಾಳೆ (ಜುಲೈ11) ರಜೆ: ಡಾ. ರಾಜೇಂದ್ರ ಕೆವಿ ಆದೇಶ
ಮಂಗಳೂರು, ಜುಲೈ 10: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮಾತ್ರ ನಾಳೆ (ಜುಲೈ11) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಆದೇಶ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗೆ ಮಾತ್ರ ರಜೆ ಘೋಷಿಸಲಾಗಿದೆ. ಪಿಯುಸಿ, ಡಿಗ್ರಿ ಹಾಗೂ ವೃತ್ತಿಪರ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಅವುಗಳ ತಗರತಿ ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
You must be logged in to post a comment Login