MANGALORE
ಅಖಿಲ ಭಾರತ ಕಾರ್ಮಿಕರ ಮುಷ್ಕರ ಬೆಂಬಲಿಸಿ ಹಮಾಲಿ ಕಾರ್ಮಿಕರಿಂದ ಮೆರವಣಿಗೆ
ಅಖಿಲ ಭಾರತ ಕಾರ್ಮಿಕರ ಮುಷ್ಕರ ಬೆಂಬಲಿಸಿ ಹಮಾಲಿ ಕಾರ್ಮಿಕರಿಂದ ಮೆರವಣಿಗೆ
ಮಂಗಳೂರು ಜನವರಿ 5: ಜನವರಿ 8 ಹಾಗೂ 9ರಂದು ನಡೆಯಲಿರುವ ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆಯಲ್ಲಿ ಮಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಮೆರವಣಿಗೆ ಮತ್ತು ಪ್ರಚಾರ ಸಭೆ ನಡೆಸಿದರು.
ಇಂದು ಮಾರುಕಟ್ಟೆಯಲ್ಲಿ ವ್ಯಾಪಾರ ಚಟುವಟಿಕೆ ಆರಂಭಗೊಳ್ಳುತ್ತಿದ್ದಂತೆ ಕಾರ್ಮಿಕರ ಕಟ್ಟೆ ಬಳಿ ಜಮಾಯಿಸಿದ ಕಾರ್ಮಿಕರು ಪೋರ್ಟ್ ರಸ್ತೆ, ಕೃಷ್ಣಮಿಲ್ ರಸ್ತೆ, ಜೆ.ಎಂ ರಸ್ತೆ, ಚೇಂಬರ್ ರಸ್ತೆ ಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಅವರು ನರೇಂದ್ರ ಮೋದಿ ಸರಕಾರ ಕಾರ್ಪೊರೇಟ್ ಕಂಪೆನಿಗಳ ಹಿತಕಾಯುವ ಸಲುವಾಗಿ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಂಡಿದೆ.
ಸ್ವಿಸ್ ಬ್ಯಾಂಕಲ್ಲಿರುವ ಕಪ್ಪು ಹಣವನ್ನು ಎಲ್ಲಾ ಬಡವರ ಖಾತೆಗೆ 15 ಲಕ್ಷ ಹಾಕುತ್ತೇನೆ ಮುಗ್ದ ಜನರನ್ನು ನಂಬಿಸಿ ಅಧಿಕಾರಕ್ಕೇರಿದ ನಂತರ ದೇಶದ ರೈತರು,ಕಾರ್ಮಿಕರಿಗೆ ಸಾಲುಸಾಲು ಸಂಕಷ್ಟಗಳ ಕೊಡುಗೆಗಳನ್ನು ಕೊಟ್ಟರೇ ವಿನಹ ಅಚ್ಚೇದಿನ್ ಕೊಡಲಿಲ್ಲ ಎಂದು ಇಮ್ತಿಯಾಝ್ ಆಪಾದಿಸಿದರು.
Facebook Comments
You may like
ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಕೊಲೆ
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಉಳ್ಳಾಲ ಮಹಿಳೆಗೆ ಅತ್ಯಾಚಾರ ಕಿರುಕುಳ ಆರೋಪ – ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ :ಎಸ್ಡಿಪಿಐ
ಪಾಕ್ ಪರ ಘೋಷಣೆ ನೈಜ ಆರೋಪಿಗಳಾದ ಸಂಘಪರಿವಾರದವರನ್ನು ಬಂಧಿಸದಿದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಮಾರ್ಚ್ : ಎಸ್ಡಿಪಿಐ
ಪಾಕ್ ಪರ ಘೋಷಣೆ ನೈಜ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಎಸ್ ಡಿಪಿಐ ನಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಸುಳ್ಳಾರೋಪ ಮಾಡಿ ಅಮಾಯಕರ ಬಂಧನ ಖಂಡನೀಯ: ಎಸ್ಡಿಪಿಐ
You must be logged in to post a comment Login