Connect with us

    LATEST NEWS

    ರೈಲು ಹಳಿ ದಾಟುವಾಗ ಡಿಕ್ಕಿ ಹೊಡೆದ ಟ್ರೈನ್ – ಐವರು ಸಾವು

    ಅಮರಾವತಿ: ರೈಲು ಹಳಿ ದಾಟುತ್ತಿದ್ದ ಸಂದರ್ಭ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಧಾರುಣವಾಗಿ ಸಾವನಪ್ಪಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ನಡೆದಿದೆ.


    ಕೊಯಮತ್ತೂರು- ಸಿಲ್ಚಾರ್ ಎಕ್ಸ್‍ಪ್ರೆಸ್ ರೈಲಿನಿಂದ ಸಿಗಡಮ್ -ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಪ್ರಯಾಣಿಕರು ಓಡಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅದೇ ಹಳಿಯಲ್ಲಿ ವೇಗವಾಗಿ ಬಂದ ಭುವನೇಶ್ವರ-ಮುಂಬೈ ಕೊನಾರ್ಕ್ ರೈಲು, ಹಳಿಯ ಮೇಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಐವರ ಮೃತದೇಹಗಳ ಗುರುತು ಪತ್ತೆ ಮಾಡಲಾಗಿದೆ. ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply