Connect with us

LATEST NEWS

ರೈಲಿನಡಿಗೆ ಬಿದ್ದು ನವವಾಹಿತ ಸಾವು….!!

ಮಂಗಳೂರು ಸೆಪ್ಟೆಂಬರ್ 26: ಚಲಿಸುತ್ತಿರುವ ರೈಲಿನಡಿಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ನಿನ್ನೆ ಮುಂಜಾನೆ ನಡೆದಿದೆ.


ಮೃತರನ್ನು ಜಪ್ಪಿನಮೊಗರು ತಂದೊಳಿಗೆ ನಿವಾಸಿ ಧೀರಜ್( 32) ಎಂದು ಗುರುತಿಸಲಾಗಿದೆ. ಈತನಿಗೆ 10 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಜಪ್ಪುವಿನಲ್ಲಿ ಪತ್ನಿಯೊಂದಿಗೆ ವಾಸವಿದ್ದರು.

ಬೆಳಗ್ಗೆ 6.50ಕ್ಕೆ ಮನೆಯಿಂದ ಹೊರಟು ಬಂದಿದ್ದು, ಸುಮಾರು 7 ಗಂಟೆಯ ವೇಳೆಗೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಜಾವಿನ ವೇಳೆ ತಿಂಡಿ ತರುತ್ತೇನೆ ಎಂದು ಮನೆಯಿಂದ ಹೊರಟಿದ್ದರು ಎನ್ನಲಾಗಿದೆ. ಧೀರಜ್ ಅವರು ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *