KARNATAKA
ದೂದ್ ಸಾಗರ್ ಬಳಿ ಹಳಿತಪ್ಪಿದ ಅಮರಾವತಿ ಎಕ್ಸ್ ಪ್ರೆಸ್ ರೈಲು
ಬೆಳಗಾವಿ: ಗೋವಾದಿಂದ ಹೌರಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ ಪ್ರೆಸ್ ರೈಲು ಗೋವಾದ ದೂದ್ ಸಾಗರ್ ಬಳಿ ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ವಾಸ್ಕೋ-ಡ-ಗಾಮಾ-ಹೌರಾ ಅಮರಾವತಿ ಎಕ್ಸ್ಪ್ರೆಸ್ನ ಪ್ರಮುಖ ಇಂಜಿನ್ನ ಮುಂಭಾಗ ಮಂಗಳವಾರ ಬೆಳಿಗ್ಗೆ ದೂಧಸಾಗರ ಮತ್ತು ಕಾರಂಜೋಲ್ ನಡುವೆ ಹಳಿತಪ್ಪಿವೆ. ಮೂಲಗಳ ಪ್ರಕಾರ ರೈಲು ಬೆಳಗ್ಗೆ 6.30ಕ್ಕೆ ವಾಸ್ಕೋ-ಡ-ಗಾಮಾದಿಂದ ಹೊರಟು 8.50ಕ್ಕೆ ದೂಧಸಾಗರ್ ದಾಟಿತ್ತು. ಈ ವೇಳೆ ರೈಲಿನ ಎಂಜಿನ ಮುಂಭಾಗದ ಎರಡು ಗಾಲಿಗಳು ಹಳಿ ತಪ್ಪಿವೆ. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ರೈಲಿನ ಸಂಪೂರ್ಣ ರೇಕ್ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಅಪಘಾತ ಪರಿಹಾರ ರೈಲು (ಎಆರ್ ಟಿ) ಬೆಂಬಲದೊಂದಿಗೆ ಇದನ್ನು ಸರಿ ಮಾಡಲಾಗಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ,” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
You must be logged in to post a comment Login