Connect with us

KARNATAKA

ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ತರಭೇತಿ ವಿಮಾನ

ಬೆಳಗಾವಿ ಮೇ 30 : ತರಭೇತಿ ನಿರತ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ ಘಟನೆ ಬೆಳಗಾವಿಯ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ನಡೆದಿದೆ.


ಸಮೀಪದ ಸಾಂಬ್ರಾ ಗ್ರಾಮದ ಬಳಿ ಇರುವ ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.


ರೆಡ್ ಬರ್ಡ್ ಸಂಸ್ಥೆಗೆ ಸೇರಿದ ವಿಟಿ- ಆರ್ ಬಿಎಫ್ ತರಬೇತಿ ವಿಮಾನ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು. ಇದರಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರೀಹಾಳ ಠಾಣೆ ಪೊಲೀಸರು, ವಾಯು ಸೇನೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *