Connect with us

KARNATAKA

6 ತಿಂಗಳ ಹಿಂದೆ ಮೃತ ಅಧಿಕಾರಿಗೆ ವರ್ಗಾವಣೆ, ಇಲಾಖೆಗೆ ಮುಜುಗರ ತಂದಿಟ್ಟ ಸರ್ಕಾರದ ಆದೇಶ..!

ಕಲಬುರಗಿ : ಆರು ತಿಂಗಳ ಹಿಂದೆ  ಸಾವನ್ನಪಿದ್ದ ಅಧಿಕಾರಿಗೆ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದೆ. ಸರ್ಕಾದ ಈ ಆದೇಶ ಇಲಾಖೆಗೆ ಮುಜುಗರ ತಂದಿಟ್ಟಿದೆ.

ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜನಿಯರ್ ಅಶೋಕ ಪುಟಪಾಕ್ ಎಂಬ ಅಧಿಕಾರಿ ಆರು ತಿಂಗಳ ಹಿಂದೆ ಮೃತಪಟ್ಟಿದ್ದು ಜುಲೈ 9 ರಂದು ಕೊಡಗಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವಾಸ್ತವವಾಗಿ, ಅಶೋಕ ಪುಟಪಾಕ್ ಕಳೆದ ಜನೆವರಿ 12 ರಂದು ಮೃತ ಪಟ್ಟಿದ್ದರು. ಈ ವರ್ಗಾವಣೆಯ ಪ್ರತಿ ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗಿದ್ದು ನಗರಾಭಿವೃದ್ಧಿ ಇಲಾಖೆ ಹಾಸ್ಯಾಸ್ಪದ ಎಡವಟ್ಟು ಮಾಡಿಕೊಂಡಿದೆ.

ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯಲ್ಲಿ ಕಿರಿಯ ಇಂಜನಿಯರ್ ಆಗಿ ಕೆಲಸ ಮಾಡ್ತಿದ್ದ ಅಶೋಕ್ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದ ನಿವಾಸಿ. ಇಲಾಖೆಯ ನೌಕರ ಮೃತಪಟ್ಟ ವಿಚಾರ ಗೊತ್ತಿಲ್ಲದೆ ವರ್ಗಾವಣೆ ಮಾಡಿದೆಯಾ ಅಥವಾ ಸಾಯುವ ಮುನ್ನ ಅಶೋಕ್ ಪುಟಪಾಕ್ ವರ್ಗಾವಣೆ ಬಯಸಿದ್ದರಾ ಹಾಗಿದ್ದರೆ ಈ ಆರು ತಿಂಗಳು ಸಂಬಳವೂ ಅವರ ಖಾತೆಗೆ ಜಮೆ ಆಗುತ್ತಿತ್ತೇ? ಈ ಪ್ರಶ್ನೆಗೆ ಇಲಾಖೆ ಇನ್ನೂ ಉತ್ತರಿಸಿಲ್ಲ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿರುವ ಈ ಎಡವಟ್ಟು ಇಲಾಖೆಗೂ ಸಚಿವರಿಗೂ ಇದೀಗ ಮುಜುಗರ ಸೃಷ್ಟಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *