LATEST NEWS
ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಏಳು ಮಂದಿ ಸಾವು…!!
ಛತ್ತೀಸಗಡ ಸೆಪ್ಟೆಂಬರ್ 12: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನಪ್ಪಿರುವ ಘಟನೆ ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್ಪುರದಿಂದ ಸರ್ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ.
ಎದುರಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್ ವೇಳೆ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಏಳು ಮಂದಿ ಬಸ್ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
You must be logged in to post a comment Login