LATEST NEWS
ಅಯೋಧ್ಯೆಯಲ್ಲಿ ರಾಮಲಲ್ಲಾನ ನೋಡಲು ಸಾಗರೋಪಾದಿಯಲ್ಲಿ ಬಂದ ಭಕ್ತರು…!!
ಅಯೋಧ್ಯೆ ಜನವರಿ 23: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಆಗಿ ಇನ್ನೂ ಒಂದು ದಿನ ಕಳೆಯುವ ಮೊದಲೇ ಇದೀಗ ಅಯೋಧ್ಯೆಯಲ್ಲಿ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿದ್ದು, ಕೆಲವು ಸಮಯ ನೂಕು ನುಗ್ಗಲು ಆದ ಘಟನೆ ನಡೆದಿದೆ.
ಇಂದು ಸಾವಿರಾರು ಭಕ್ತರು ಬೆಳಗಿನ ಜಾವ 3 ಗಂಟೆಯಿಂದಲೇ ದೇವಾಲಯದ ಎದುರು ನಿಂತು ಕಾಯುತ್ತಿದ್ದಾರೆ. ಸಮಯ ಕಳೆಯುತ್ತಿದ್ದಂತೆ ಉದ್ರೇಕಗೊಂಡ ಭಕ್ತರು, ಪೊಲೀಸರು ಹಾಕಿದ್ದ ಹಗ್ಗವನ್ನು ತಳ್ಳಿ ರಾಮಮಂದಿರದ ಆವರಣದ ಒಳಕ್ಕೆ ನುಗ್ಗಿದ್ದಾರೆ.
ಭಕ್ತರು ಬಾಲರಾಮನ ದರ್ಶನಕ್ಕಾಗಿ ಎರಡು ಅವಧಿಯನ್ನು ನಿಗದಿಪಡಿಸಲಾಗಿದೆ. ಮೊದಲ ಅವಧಿಯು ಬೆಳಿಗ್ಗೆ 7ರಿಂದ 11.30ರವರೆಗೆ ಮತ್ತು ಎರಡನೇ ಅವಧಿಯು ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಗದಿಪಡಿಸಲಾಗಿದೆ.
ನಿತ್ಯ ಸಂಜೆ 6.30ಕ್ಕೆ ವಿಶೇಷ ಭಜನೆ, ಶೃಂಗಾರ ಆರತಿ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಬಾಲರಾಮನಿಗೆ ಆರತಿ ನೆರವೇರಲಿದ್ದು ಒಂದು ದಿನ ಮೊದಲೇ ಭಕ್ತರು ತಮ್ಮ ಸ್ಥಾನವನ್ನು ಕಾಯ್ದಿರಿಸಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.
You must be logged in to post a comment Login