KARNATAKA
ತುಮಕೂರು: ಬೆಂಕಿ ತಗುಲಿ 10 ಗುಡಿಸಲುಗಳು ಭಸ್ಮ, ಮತದಾನ ಮಾಡಲು ಮತಗಟ್ಟೆಗೆ ತೆರಳಿದ್ದರಿಂದ ಉಳಿದುವು ಜೀವ..!
ತುಮಕೂರು : ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 10 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರಿನ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
mkur, fireಬೆಂಕಿಯ ಕೆನ್ನಾಲಿಗೆಗೆ ಸುಮಾರು 5 ಗ್ಯಾಸ್ ಸಿಲಿಂಡರ್ ಗಳು ಸ್ಪೋಟಗೊಂಡಿವೆ ಆದ್ರೂ ಭಾರೀ ಅನಾಹುತವೊಂದು ತಪ್ಪಿದೆ. ಮತದಾನ ಮಾಡಲು ಮತಗಟ್ಟೆಗೆ ತೆರಳಿದ್ದ ವೇಳೆ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಹಾನಿಯಾಗಿದೆ ಆದ್ರೂ ಜೀವಗಳು ಉಳಿದಿವೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ ಸಿಲಿಂಡರ್ ಬ್ಲಾಸ್ಟ್ ಆಗಿ ಅನೇಕ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದ ಸ್ಥಳದಲ್ಲಿ ಮತ್ತೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಹತ್ತಕ್ಕೂ ಹೆಚ್ಚು ಮೇಕೆಗಳು ಗಾಯಗೊಂಡಿದೆ ಎಂದು ಹೇಳಲಾಗಿದೆ. ಚಿಂಪುಗಾನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗುಡಿಸಲುಗಳಿಗೆ ಬೆಂಕಿ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ನಿವೇಶನ ಹಂಚಿ ಮನೆ ಕಟ್ಟಿಸಿ ಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
You must be logged in to post a comment Login