Connect with us

    KARNATAKA

    ತುಮಕೂರು: ಕೆರೆಗೆ ಬಿದ್ದ ಕಾರು, ಒಂದೇ ಕುಟುಂಬದ ಮೂವರು ಮೃತ್ಯು..!

    ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರ ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ ಮುಂಜಾನೆ ನಡೆದಿದೆ.

     

    ವೀರಾಪುರ ಗ್ರಾಮದ ನಿವಾಸಿಗಳಾದ ಯಮುನಾ, ದೊಡ್ಡಣ್ಣ ಮತ್ತು ಸಣ್ಣಮ್ಮ ಮೃತಪಟ್ಟವರು. ಪ್ರವೀಣ್ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಪ್ರವೀಣ್ ಅವರು ಪತ್ನಿ ಯಮುನಾ, ಮಾವ ದೊಡ್ಡಣ್ಣ ಮತ್ತು ಅತ್ತೆ ಸಣ್ಣಮ್ಮ ಜೊತೆ ಇಂದು ಭಾನುವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಕ್ಷೇತ್ರಕ್ಕೆ ಕಾರಿನಲ್ಲಿ ಹೊರಟಿದ್ದರು. ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply