Connect with us

    KARNATAKA

    ತುಮಕೂರಿನಲ್ಲಿ ಪರಸ್ಪರ ಗುದ್ದಾಡಿದ ಬೈಕುಗಳು,ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

    ತುಮಕೂರು : ಎರಡು ಬೈಕ್ ಗಳ  ಪರಸ್ಪರ ಗುದ್ದಾಡಿದ ಕಾರಣ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ನಡೆದಿದೆ.

    ಹೊಳೆ ನರಸಿಪುರ ತಾಲೂಕು, ಕಳ್ಳಿ ಮೂಲದ ನವೀನ್(28), ತಿಪಟೂರು ತಾಲೂಕಿನ ಗಂಗನಘಟ್ಟ ಗ್ರಾಮದ ಶೇಷಾದ್ರಿ(47) ಮೃತ ದುರ್ದೈವಿಗಳು. ನವೀನ್ ಚನ್ನರಾಯಪಟ್ಟಣ ಕಡೆಯಿಂದ ತಿಪಟೂರು ಮಾರ್ಗವಾಗಿ ತೆರಳುತ್ತಿದ್ದರು. ಶೇಷಾದ್ರಿ ಹಾಗೂ ಸಚಿನ್ ಎಂಬುವರು ಬೈಕ್‌ನಲ್ಲಿ ಹಿಂದಿನಿಂದ ಬರುತ್ತಿದ್ದರು. ಮುಂದೆ ಹೋಗುತ್ತಿದ್ದ ನವೀನ್ ಏಕಾಏಕಿ ಬೈಕ್ ತಿರುಗಿಸಿದ ಪರಿಣಾಮ ಎರಡು ಬೈಕ್‌ಗಳ ನಡುವೆ ಡಿಕ್ಕಿ ಹೊಡೆದಿದೆ. ನವೀನ್, ಶೇಷಾದ್ರಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸಚಿನ್ ಎಂಬುವರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೊಣವಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply