LATEST NEWS
ನೇತ್ರಾವತಿ ಸೇತುವೆ ಬಳಿ ಯುವಕನ ನಾಪತ್ತೆ ಪ್ರಕರಣ ಟ್ವಿಸ್ಟ್

ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಪ್ರವೀಣ್ ಸಫಲ್ಯ
ಮಂಗಳೂರು ಜೂನ್ 10: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅನಾಥವಾಗಿ ಪತ್ತೆಯಾಗಿದ್ದ ಬೈಕ್ ಮತ್ತು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನಾಪತ್ತೆಯಾದ ವ್ಯಕ್ತಿ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾನೆ.
ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ ಎಂಬಾತನ ಬೈಕ್ ಅನಾಥ ಸ್ಥಿತಿಯಲ್ಲಿ ನೇತ್ರಾವತಿ ನದಿ ತಟದಲ್ಲಿ ಪತ್ತೆಯಾಗಿತ್ತು.
ಕಳೆದ ರಾತ್ರಿ ಏಳು ಗಂಟೆಯ ಸುಮಾರಿಗೆ ಕಚೇರಿಯಿಂದ ಹೊರಟಿದ್ದ ಈತ ನಂತರ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಹೀಗಾಗಿ ಈತ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.

ಇಂದು ಬೆಳಿಗ್ಗೆಯಿಂದಲೇ ಸೇತುವೆ ಸುತ್ತ ಜನರು ಸೇರಿದ್ದು, ಹುಡುಕಾಟ ನಡೆಸಿದ್ದರು. ಆದರೆ ಇದೀಗ ತಾನು ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಇರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.