Connect with us

    BANTWAL

    ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯರಿಗೆ ಬೆದರಿಕೆ ಹಾಕಿದ ಆರೋಪಿಗಳು ಅಂದರ್..!!

    ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯರಿಗೆ ಬೆದರಿಕೆ ಹಾಕಿದ ಆರೋಪಿಗಳು ಅಂದರ್..!!

    ಬಂಟ್ವಾಳ ಎಪ್ರಿಲ್ 3: ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಬೆದರಿಕೆ ಹಾಕಿದ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಬಂಧಿತ ಎಂದು ಗುರುತಿಸಲಾಗಿದೆ.

    ಏಪ್ರಿಲ್ 1 ರಂದು ಆರೋಗ್ಯ ಇಲಾಖೆಯ ಅಡಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ಅಮ್ಟಾಡಿ ಗ್ರಾಮದ ತುಳಸಿ ಎಂಬವರು ಕೊರೋನಾ ವೈರಸ್ ಮುಂಜಾಗೃತಾ ಕರ್ತವ್ಯದ ನಿಮಿತ್ತ ವಿದೇಶದಿಂದ ಆಗಮಿಸಿರುವ ಕಿನ್ನಿಬೆಟ್ಟು ಪರಿಸರದ ನಿತೇಶ ಹಾಗೂ ಕಲಾಯಿ ಪರಿಸರದ ಜಯಂತ ಎಂಬವರುಗಳ ಆರೋಗ್ಯವನ್ನು ಮೊಬೈಲ್ ಮೂಲಕ ಕರೆ ಮಾಡಿ ವಿಚಾರಿಸಿದ್ದರು.

    ಆ ದಿನ ಸಂಜೆ ಸಮಯ ಸುಮಾರು 06.00 ಗಂಟೆಗೆ ಕರ್ತವ್ಯದಲ್ಲಿ ಇರುವ ಸಮಯ ಸದ್ರಿ ವಿದೇಶದಿಂದ ಆಗಮಿಸಿರುವ ನಿತೇಶ ಎಂಬಾತನ ಸಂಬಂಧಿ ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಎಂಬವರು ಸದರಿ ಆಶಾ ಕಾರ್ಯಕರ್ತೆಗೆ ಮೊಬೈಲ್ ಮೂಲಕ ಕರೆಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

    Share Information
    Advertisement
    Click to comment

    You must be logged in to post a comment Login

    Leave a Reply