LATEST NEWS
ಅಟ್ಟಾಡಿಸಿಕೊಂಡು ಬಂದ ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಮಕ್ಕಳು ಮೃತ್ಯು..!
ಜೋಧಪುರ: ಅಟ್ಟಾಡಿಸಿಕೊಂಡು ಬಂದಿದ್ದ ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಸಮಯದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಜೋಧಪುರ ಬನಾರ್ ಪ್ರದೇಶದಲ್ಲಿ ನಡೆದಿದೆ.
ಅನನ್ಯ ಕನ್ವರ್ (9) ಮತ್ತು ಯುವರಾಜ್ ಸಿಂಗ್ (11) ಮೃತ ದುರ್ದೈವಿಗಳಾಗಿದ್ದಾರೆ.ಮೃತ ಮಕ್ಕಳು ಬನಾರ್ ಪ್ರದೇಶದ ಗಣೇಶಪುರ ನಿವಾಸಿಗಳಾಗಿದ್ದು, ಆರ್ಮಿ ಚಿಲ್ಡ್ರನ್ ಅಕಾಡೆಮಿಯಲ್ಲಿ 5 ಮತ್ತು 7 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಸೋದರ ಸಂಬಂಧಿಗಳಾದ ಇಬ್ಬರು ಮಕ್ಕಳು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಾರ್ಗ ಮಧ್ಯೆ ನಾಯಿಗಳು ಅಟ್ಟಿಸಿಕೊಂಡು ಬಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಭಯಭೀತರಾದ ಮಕ್ಕಳು ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಲು ಪ್ರಾರಂಭಿಸಿದ್ದರು. ಆದರೆ, ಈ ವೇಳೆ ರೈಲು ಬರುವುದನ್ನು ಗಮನಿಸದೆ ಅವರು ರೈಲ್ವೆ ಹಳಿಗಳ ಮೇಲೆ ಪ್ರವೇಶಿಸಿದ್ದಾರೆ, ಕೆಲವೇ ಕ್ಷಣಗಳಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
You must be logged in to post a comment Login