Connect with us

LATEST NEWS

ತೋಟ ಬೆಂಗ್ರೆಯ ಅಳಿವೆ ಬಾಗಿಲು ಸಮೀಪ ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ

ಮಂಗಳೂರು ಮೇ 30: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿದ್ದು, ಸಮುದ್ರ ತೀರ ಕೂಡ ಪ್ರಕ್ಷುಬ್ದಗೊಂಡಿದೆ. ಈ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ತೋಟ ಬೆಂಗ್ರೆಯ ಅಳಿವೆ ಬಾಗಿಲು ಸಮೀಪ ನಡೆದಿದೆ.


ನಾಪತ್ತೆಯಾದವರನ್ನು ಯಶವಂತ, ಕಮಲಾಕ್ಷ ಎಂದು ಗುರುತಿಸಲಾಗಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಭಾರೀ ಗಾಳಿ ಮಳೆಗೆ ದೋಣಿ ಮಗುಚಿ ಬಿತ್ತು ಎನ್ನಲಾಗಿದೆ‌. ಇದರಿಂದ ದೋಣಿಯಲ್ಲಿದ್ದ ಯಶವಂತ ಮತ್ತು ಕಮಲಾಕ್ಷ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ನಾಡ ದೋಣಿಯ ಪೆಟ್ರೋಲ್ ಟ್ಯಾಂಕ್ ತೋಟ ಬೆಂಗ್ರೆ ಬಳಿಯ ದಡಕ್ಕೆ ಬಂದು ಬಿದ್ದಿದೆ. ನಾಡದೋಣಿ ಕೂಡ ಕಣ್ಮರೆಯಾಗಿದೆ. ಸ್ಥಳೀಯರು ಹುಡುಕಾಟ ಆರಂಭಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *