Connect with us

LATEST NEWS

ಅಬ್ದುಲ್ ಬಶೀರ್ ಕೊಲೆ ಪ್ರಕರಣದಲ್ಲಿ ಮತ್ತೆ ಇಬ್ಬರು ವಶಕ್ಕೆ

ಅಬ್ದುಲ್ ಬಶೀರ್ ಕೊಲೆ ಪ್ರಕರಣದಲ್ಲಿ ಮತ್ತೆ ಇಬ್ಬರು ವಶಕ್ಕೆ

ಮಂಗಳೂರು ಜನವರಿ 14: ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಲ್ಲಿ ಅಬ್ದುಲ್ ಬಶೀರ್ ಎಂಬವರ ಕೊಲೆಯಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಜನವರಿ 3 ರಂದು ರಂದು ರಾತ್ರಿ ಮಂಗಳೂರು ನಗರದ ಕೊಟ್ಟಾರ ಚೌಕಿ ಬಳಿ ಫಾಸ್ಟ್ ಪುಡ್ ವ್ಯಾಪಾರವನ್ನು ನಡೆಸುತ್ತಿದ್ದ ಅಬ್ದುಲ್ ಬಶೀರ್ ಎಂಬವರು ತನ್ನ ಫಾಸ್ಟ್ ಪುಡ್ ಹೊಟೇಲ್ ನ್ನು ಬಂದ್ ಮಾಡಿ ಮನೆಗೆ ಹೋಗುವಷ್ಟರಲ್ಲಿ ಬೈಕ್ ನಲ್ಲಿ ಬಂದ ಆರೋಪಿಗಳು ಅಬ್ದುಲ್ ಬಶೀರ್ ನನ್ನು ಮರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅಬ್ದುಲ್ ಬಶೀರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಜನವರಿ 07 ರಂದು ಮೃತಪಟ್ಟಿದ್ದರು.

ಈ ಪ್ರಕರಣಕ್ಕೆ ತನಿಖೆ ನಡೆಸಿದ ಪೊಲೀಸರು ಈ ಕೊಲೆಯಲ್ಲಿ ಭಾಗಿಯಾಗಿದ್ದ 4 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ನಂತರ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಮತ್ತೆ ಇಬ್ಬರು ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದ್ದು,

ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ಕಾಸರಗೊಡಿನ ಲತೀಶ್ ಮತ್ತು ಪುಷ್ಪರಾಜ್ ಎಂದು ಗುರುತಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *