Connect with us

    BELTHANGADI

    ಬೆಳ್ತಂಗಡಿ – ಕರಿಮಣಿ ಸರ ಕದ್ದ ಇಬ್ಬರು ಕಳ್ಳಿಯರು ಅರೆಸ್ಟ್

    ಬೆಳ್ತಂಗಡಿ ಡಿಸೆಂಬರ್ 21: ಸರಕಾರಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕರಿಮಣಿ ಸರಕಳ್ಳತನ ಮಾಡಿದ್ದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಎಂದು ಗುರುತಿಸಲಾಗಿದೆ.


    ಆರೋಪಿಗಳು ಡಿಸೆಂಬರ್ 12ರಂದು ವಾರಿಜಾ ಅವರು ಸರಕಾರಿ ಬಸ್ ಹತ್ತುವ ವೇಳೆ ಅವರು ಧರಿಸಿದ್ದ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಿದ್ದರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.
    ವಾರಿಜಾ ಅವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್‌ ಮತ್ತು ಅವರ್ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಡಿ. 20ರಂದು ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ. ಇನ್ನು ಆರೋಪಿಗಳು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗಳನ್ನು ಡಿ. 20 ನ್ಯಾಯಾಧೀಶರ ಬಳಿ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply