Connect with us

LATEST NEWS

ಉಡುಪಿ: ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ

ಉಡುಪಿ, ಜೂನ್ 17: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ.

ಅಪಾರ ಪ್ರಮಾಣದ ಚಿನ್ನಾಭರಣಗಳು ಮನೆಯಲ್ಲಿ ಪತ್ತೆಯಾಗಿದ್ದು, ಎರಡು ಕೆಜಿಗೂ ಅಧಿಕ ಚಿನ್ನವನ್ನು ಅಧಿಕಾರಿಗಳು ಪತ್ತೆಮಾಡಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ನಗದು ಇರಿಸಿಕೊಂಡಿದ್ದ ಹರೀಶ್ ರವರು ದುಬಾರಿ ಬೆಲೆಯ ವಾಚುಗಳು, ಮೂರು ವಾಹನಗಳು, ಚಿನ್ನದ ತಟ್ಟೆ, ಚಿನ್ನದ ತಗಡು, ಅಪಾರ ಚಿನ್ನದ ಆಭರಣಗಳು ಪತ್ತೆಯಾಗಿದೆ.

15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಸರ, ನೆಕ್ಲೆಸ್,ಬ್ರಾಸ್ಲೆಟ್ ಪತ್ತೆಯಾಗಿದೆ. ಚಿನ್ನದ ಒಡವೆಗಳು, ಉಂಗುರ ದೇವರ ಮೂರ್ತಿ ಹಾಗು ಆಸ್ತಿ ಪತ್ರ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡದ ದಾಳಿ ನಡೆಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *