Connect with us

LATEST NEWS

ಶಾಲಾ ವಾಹನ ಗುದ್ದಿದ ರಭಸಕ್ಕೆ ಪಾದಚಾರಿ ಮಹಿಳೆ ಸಾವು

ಉಡುಪಿ ಡಿಸೆಂಬರ್ 10: ಶಾಲಾ ವಾಹನವೊಂದು ಢಿಕ್ಕಿಯಾದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿಯವರ ಪತ್ನಿ ಸಪ್ನ (54) ಎಂದು ಗುರುತಿಸಲಾಗಿದೆ.


ಅವರು ಕೊಪ್ಪಲಂಗಡಿಯಲ್ಲಿ ದಿನಸಿ ಅಂಗಡಿಗೆ ಹೋಗಿ ಹಿಂತಿರುಗಿ ಮನೆ ಕಡೆಗೆ ಹೋಗಲು ಕಮ್ಯನಿಟಿ ಹಾಲ್ ಸಮೀಪ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಢಿಕ್ಕಿಯಾಗಿದೆ.
ಘಟನೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *