Connect with us

LATEST NEWS

ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ – ಸ್ಕೂಟರ್ ಸವಾರ ಸಾವು..!!

Share Information

ಉಡುಪಿ ಜುಲೈ 22 : ಸ್ಕೂಟರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಸಮೀಪದ ಹಿರಿಯಡ್ಕದಲ್ಲಿ ನಡೆದಿದೆ.


ಮೃತ ಸ್ಕೂಟರ್ ಸವಾರ ಕೃಷ್ಣ ಪೂಜಾರಿ (57) ಎಂದು ಗುರುತಿಸಲಾಗಿದೆ. ಒಂತಿಬೆಟ್ಟು ಎಂಬಲ್ಲಿ ಸಂಭವಿಸಿದ ಅವಘಡದಲ್ಲಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸಹಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.


Share Information
Advertisement
Click to comment

You must be logged in to post a comment Login

Leave a Reply