LATEST NEWS
ಉಡುಪಿ ದಕ್ಷಿಣಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜು ರಜೆಗಳಿಗೆ ನಾಳೆ (ಜನವರಿ 8) ರಜೆ – ಜಿಲ್ಲಾಧಿಕಾರಿ
ಉಡುಪಿ ದಕ್ಷಿಣಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜು ರಜೆಗಳಿಗೆ ನಾಳೆ (ಜನವರಿ 8) ರಜೆ – ಜಿಲ್ಲಾಧಿಕಾರಿ
ಮಂಗಳೂರು ಜನವರಿ 7: ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆಕೊಟ್ಟಿರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜನವರಿ 8)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಕಾರ್ಮಿಕ ಸಂಘಟನೆಗಳು ಕೇಂದ್ರ ನೀತಿ ವಿರೋಧಿಸಿ ಎರಡು ದಿನಗಳ ಮುಷ್ಕರಕ್ಕೆ ಕರೆ ಕೊಟ್ಟಿವೆ. ಈ ಹಿನ್ನಲೆಯಲ್ಲಿ ನಾಳೆ ರಾಜ್ಯದಾದ್ಯಂತ ಬಸ್ ರಸ್ತೆಗೆ ಇಳಿಯುವುದು ಅನುಮಾನ ಎಂದು ಹೇಳಲಾಗಿದ್ದು, ಸುರಕ್ಷತೆಯ ದೃಷ್ಠಿಯಿಂದ ನಾಳೆ ( ಜನವರಿ 8) ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿದ್ದಾರೆ.
You must be logged in to post a comment Login