Connect with us

LATEST NEWS

ಬ್ರಹ್ಮಗಿರಿಯಲ್ಲಿ ಹಾಕಲಾಗಿದ್ದ ವೀರಸಾವರ್ಕರ್ ಬ್ಯಾನರ್ ತೆರವು….!!

ಉಡುಪಿ ಅಗಸ್ಟ್ 19: ಭಾರೀ ವಿವಾದಕ್ಕೆ ಕಾರಣವಾಗಿದ್ದ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫೋಟೋವಿದ್ದ ಬ್ಯಾನರ್‌ನ್ನು ಅನುಮತಿ ಅವಧಿ ಮುಗಿಯುವ ಮುನ್ನವೇ ಹಿಂದೂ ಮುಖಂಡರು ತೆರವುಗೊಳಿಸಿದ್ದಾರೆ.


ಭಾರೀ ವಿವಾದಕ್ಕೆ ಕಾರಣವಾಗಿದ್ದ ಉಡುಪಿ ಬ್ರಹ್ಮಗಿರಿಯಲ್ಲಿ ಹಾಕಲಾಗಿದ್ದ ವೀರ ಸಾವರ್ಕರ್ ಬ್ಯಾನರ್ ಗೆ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಈ ನಡುವೆ ಉಡುಪಿಯಲ್ಲಿ ಅಷ್ಠಮಿ ಸಂಭ್ರಮವಿದ್ದು ಇದು ಪೊಲೀಸರಿಗೆ ತಲೆನೋವಾಗಿ ಪರಿಣಿಮಿಸಿತ್ತು. ಈ ಹಿನ್ನಲೆ ಪೊಲೀಸರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಬ್ಯಾನರ್‌ ತೆಗೆಯಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.


ಬ್ರಹ್ಮಗಿರಿ ಸರ್ಕಲ್‌ನಿಂದ ಹುತಾತ್ಮ ಸ್ಮಾರಕದವರೆಗೆ ಮೆರವಣಿಗೆಯಲ್ಲಿ ಬ್ಯಾನರ್ ತಂದು ಕಾರ್ಯಕ್ರಮ ಸಮಾಪ್ತಿಗೊಳಿಸಲಾಯಿತು.ಹಿಂದೂ ಮಹಾಸಭಾ, ಹಿಂದೂ ಜಾಗರಣ ವೇದಿಕೆ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಪುತ್ಥಳಿ ಸ್ಥಾಪನೆಗೆ ಅನುಮತಿ ಕೋರಿ ನಗರಸಭೆ, ಜಿಲ್ಲಾಡಳಿತಕ್ಕೆ ಮನವಿ ನೀಡಲಾಗುವುದು ಎಂದು ಇದೇ ವೇಳೆ ಸಂಘಟನೆಗಳ ಪ್ರಮುಖರು ತಿಳಿಸಿದರು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *