Connect with us

    KARNATAKA

    ಉಡುಪಿ ಮೂಲದ ಬಾರ್ ಓನರ್ ಮನೀಶ್ ಶೆಟ್ಟಿ ಬೆಂಗಳೂರಿನಲ್ಲಿ ಗುಂಡಿಕ್ಕಿ ಹತ್ಯೆ..!

    ಬೆಂಗಳೂರು, ಅಕ್ಟೋಬರ್ 16:  ನಗರದ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾಯಾಗಿದ್ದಾರೆ.

    ಕೊಲೆಯಾದ ಮನೀಶ್ ಶೆಟ್ಟಿ ಕರಾವಳಿ ಮೂಲದವನಾಗಿದ್ದು ಬೆಂಗಳೂರಿನ ಡ್ಯುಯೆಟ್ ಬಾರ್ ಮಾಲೀಕನಾಗಿದ್ದ ಎನ್ನಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

    ರೆಸ್ಟ್ ಹೌಸ್ ರಸ್ತೆಯಲ್ಲಿರುವ ತಮ್ಮ ಬಾರ್ ಮುಂದೆ ರಾತ್ರಿ 9 ರ ಸುಮಾರಿಗೆ ನಿಂತಿದ್ದ 45 ವರ್ಷ ವಯಸ್ಸಿನ ಮನೀಶ್ ಶೆಟ್ಟಿ ಅವರ ಮೇಲೆ ಬೈಕಿನಿಂದ ಬಂದ ಅನಾಮಿಕ ವ್ಯಕ್ತಿಗಳು ಮೊದಲಿಗೆ ಮನೀಶ್ ಶೆಟ್ಟಿ ಅವರಿಗೆ ಚಾಕುವಿನಿಂದ ತಿವಿದಿದ್ದಾರೆ ನಂತರ ಡಬ್ಬಲ್ ಬ್ಯಾರೆಲ್ ಗನ್ ಬಳಸಿ ಎರಡು ಸುತ್ತು ಗುಂಡು ಹಾರಿಸಿ ಬಳಿಕ ಪರಾರಿಯಾಗಿದ್ದಾರೆ.

    ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮನೀಶ್ ರನ್ನು ತಕ್ಷಣವೇ ಸಮೀಪದ ಮಲ್ಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಯತ್ನಿಸಲಾಗಿದೆಯಾದರೂ ಅವಗಾಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

    ಮೇಲ್ನೋಟಕ್ಕೆ ಇದು ಹಳೆ ದ್ವೇಷದಿಂದ ನಡೆದ ಕೃತ್ಯ ಎಂದು ಕಂಡು ಬಂದಿದೆ. ರವಿ ಪೂಜಾರಿ ಗ್ಯಾಂಗಿನವರು ಇರಬಹುದು ಎಂದು ಶಂಕಿಸಲಾಗಿದೆ.

    ಮೃತ ಮನೀಶ್ ಶೆಟ್ಟಿ ಅವರು ಉಡುಪಿಯ ಅಂಬಾಲಪಾಡಿಯವರಾಗಿದ್ದು, ಅವರ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಹಾಗೂ ಮುಂಬೈನಲ್ಲಿ ಹಲವು ಕೇಸುಗಳಿವೆ. ಕೊಲೆ ಬೆದರಿಕೆ, ಕೊಲೆ ಯತ್ನ ಪ್ರಕರಣದ ಆರೋಪಿಯೂ ಹೌದು.

    ಮಂಗಳೂರಿನಲ್ಲಿ ರೌಡಿ ಶೀಟರ್ ಆಗಿದ್ದ ಮನೀಶ್ ಅವರು ಒಂದು ಕಾಲದಲ್ಲಿ ರವಿ ಪೂಜಾರಿಗೆ ಆಪ್ತರಾಗಿದ್ದರು ಎಂದು ಕಬ್ಬನ್ ಪಾರ್ಕ್ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಭೇಟಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply