LATEST NEWS
ಉಡುಪಿ – ನಿಂತಿದ್ದ ಬಸ್ ಗೆ ಬೈಕ್ ಡಿಕ್ಕಿ ಸವಾರ ಗಂಭೀರ
ಉಡುಪಿ ಜುಲೈ16: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ.
ಗಾಯಾಳುವನ್ನು ಉಡುಪಿ ಗುಂಡಿಬೈಲು ನಿವಾಸಿ ಲಕ್ಷ್ಮಣ್ (60) ಎಂದು ಗುರುತಿಸಲಾಗಿದೆ. ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ತಮ್ಮ ಆ್ಯಂಬುಲೆನ್ಸ್ ಮೂಲಕ ಗಾಯಾಳುವನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಕ್ಷ್ಮಣ್ ಅವರಿಗೆ ಗುಂಡಿಬೈಲು ವಿನಲ್ಲಿ ಕಾರ್ತಿಕ್ ವೆಲ್ಡಿಂಗ್ ವರ್ಕ್ ಶಾಪ್ ಇದೆ ಎಂದು ಹೇಳಲಾಗುತ್ತಿದೆ.
You must be logged in to post a comment Login