Connect with us

    DAKSHINA KANNADA

    ಬಸ್ಸಿನಲ್ಲಿ ವಿದ್ಯಾರ್ಥಿನಿ ಅಸ್ವಸ್ಥ, ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಪ್ರಾಣ ಉಳಿಸಿದ ಉಡುಪಿ ಚಾಲಕ ನಿರ್ವಾಹಕ…!!

    ಉಡುಪಿ:  ವಿದ್ಯಾರ್ಥಿನಿಯೋರ್ವಳು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ  ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ (AKMS)  ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು  ಜೀವ ಉಳಿಸಿದ ಮಾನವೀಯ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ಗುರುವಾರ ನಡೆದಿದೆ.

    ಬೆಳಗ್ಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ AKMS  ಖಾಸಾಗಿ ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿ ಯೊಬ್ಬಳು ಹತ್ತಿದ್ದಾಳೆ. ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ಈ ವಿದ್ಯಾರ್ಥಿನಿ  ಏಕಾಏಕಿ ಅಸ್ವಸ್ಥಗೊಂಡಿದ್ದಳು.

    ಇದನ್ನು ಗಮನಿಸಿದ ಬಸ್ಸಿನ ಚಾಲಕ ನಸೀಫ್ ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿಎಂಎ. ಪೈ ಆಸ್ಪತ್ರೆಗೆ ಕೊಂಡೊಯ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ. ಬಸ್ ಸಿಬಂದಿಯ ಈ ಮಾನವೀಯ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ಯವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply