Connect with us

LATEST NEWS

ಉಡುಪಿ ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ….!!

ಉಡುಪಿ ಮಾರ್ಚ್ 05: ಉಡುಪಿ ಜಿಲ್ಲಾ ಆವರಣದಲ್ಲಿ ಸಾಕ್ಷಿದಾರನೊಬ್ಬ ವಕೀಲರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿ ಶಾಹೀದ್ ಮಂಚಿ ಯನ್ನು ಪೊಲೀಸರು ಬಂಧಿಸಿದ್ದು ಹಲ್ಲೆಗೊಳಗಾದ ವಕೀಲರು ಗುರು ಎಂಬವರು ಎಂದು ತಿಳಿದು ಬಂದಿದೆ.


ಆರೋಪಿ ಶಾಹಿದ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಾಗಿ ಆಗಮಿಸಿದ್ದರು, ಆದರೆ ನ್ಯಾಯಾಧೀಶರು ಸಾಕ್ಷಿ ವಿಚಾರಣೆ ನಡೆಸದೇ ಪ್ರಕರಣ ಮುಂದೂಡಿದ್ದರು, ಈ ಹಿನ್ನಲೆ ಪ್ರಕರಣದ ವಕೀಲ ಗುರು ಹಾಗೂ ಸಾಕ್ಷಿದಾರ ಶಾಹೀದ್ ನಡುವೆ ಮಾತಿನಚಕಮಕಿ ನಡೆದಿದೆ. ಬಳಿಕ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.

ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಕೀಲರ ಸಂಘದಿಂದ ಬಹಳ ಆಕ್ರೋಶ ವ್ಯಕ್ತವಾಗಿದೆ.ಕೋರ್ಟ್ ಆವರಣದಲ್ಲಿ ಆರೋಪಿ ಮತ್ತು ವಕೀಲರ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನೆ ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *